ಗಣೇಶೋತ್ಸವದ ಹಿನ್ನೆಲೆ ಮುಂದೂಡಲ್ಪಟ್ಟಿದ್ದ ಈದ್ ಮಿಲಾದ್ ಮೆರವಣಿಗೆ ಮತ್ತು ಭಾರತ ಪಾಕಿಸ್ತಾನ ಕ್ರಿಕೆಟ್ ಪಂದ್ಯ ನಾಳೆ ಭಾನುವಾರ ಬೆಳಗಾವಿಯಲ್ಲಿ ನಡೆಯಲಿದ್ದು, ಶಾಂತಿ ಸುವ್ಯವಸ್ಥೆಯನ್ನು ಕಾಪಾಡಲೂ ಪೊಲೀಸ್ ಇಲಾಖೆ ಸಜ್ಜಾಗಿದೆ.

ಬೆಳಗಾವಿಯಲ್ಲಿ ಗಣೇಶೋತ್ಸವದ ಹಿನ್ನೆಲೆ ಸೆ.6 ರಂದು ಮುಸ್ಲಿಂ ಬಾಂಧವರು ಈದ್ ಮಿಲಾದ್ ಹಬ್ಬವನ್ನು ಆಚರಿಸಿ, ಮೆರವಣಿಗೆಯನ್ನು ಸೆಪ್ಟೆಂಬರ್ 14ಕ್ಕೆ ಮುಂದೂಡಿದ್ದರು. ಈ ಹಿನ್ನೆಲೆ ನಾಳೆ ಸಿರತ್ ಕಮೀಟಿ ಮತ್ತು ಅಂಜುಮನ್ ಸಂಸ್ಥೆಯ ನೇತೃತ್ವದಲ್ಲಿ ಬೆಳಗಾವಿ ನಗರದಲ್ಲಿ ಈದ್ ಮಿಲಾದ್ ಮೆರವಣಿಗೆ ನಡೆಯಲಿದೆ. ಶಾಂತಿಪೂರ್ಣವಾಗಿ ಮೆರವಣಿಗೆಯನ್ನು ನಡೆಸಲು ಪೊಲೀಸ್ ಇಲಾಖೆ ಸಜ್ಜಾಗಿದೆ. ನಾಳೆ ಬೆಳಿಗ್ಗೆ ಒಂದು ಮೆರವಣಿಗೆ ಪಿಂಪಳ್ ಕಟ್ಟಾದಿಂದ ಆರಂಭಗೊಳ್ಳುವ ಮೆರವಣಿಗೆ ರಾಣಿ ಚೆನ್ನಮ್ಮ ವೃತ್ತದ ಮಾರ್ಗವಾಗಿ ಅಸಾದ್ ಖಾನ್ ದರ್ಗಾಕ್ಕೆ ತಲುಪಿ ಕೊನೆಗೊಳ್ಳಲಿದೆ. ಇನ್ನೊಂದು ಸಾಯಂಕಾಲ 4 ಗಂಟೆಗೆ ಅನಗೋಳದಿಂದ ಆರಂಭಗೊಂಡು ರಾತ್ರಿ 8 ವರೆಗೆ ಅಸಾದ್’ಖಾನ್ ದರ್ಗಾಕ್ಕೆ ತಲುಪಿ ಕೊನೆಗೊಳ್ಳಲಿದೆ. ಅಲ್ಲದೇ ನಾಳೆ ಇಂಡಿಯಾ-ಪಾಕಿಸ್ತಾನ ಕ್ರಿಕೆಟ್ ಪಂದ್ಯ ಕೂಡ ನಡೆಯಲಿದ್ದು, ಈ ಹಿನ್ನೆಲೆಯಲ್ಲಿಯೂ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಹೆಚ್ಚುವರಿ 1500 ಪೊಲೀಸರನ್ನು ನಿಯೋಜಿಸಲಾಗಿದೆ.
ಇನ್ನು ಸೂಕ್ಷ್ಮ ಅತಿಸೂಕ್ಷ್ಮ ಪ್ರದೇಶಗಳಲ್ಲಿ ಹೈಅಲರ್ಟ್ ಜಾರಿ ಮಾಡಲಾಗಿದೆ ಎಂದು ಡಿಸಿಪಿ ನಾರಾಯಣ ಬರಮನಿ ತಿಳಿಸಿದರು.


Recent Comments